Friday, April 17, 2026
Home Blog

ಎ.18ರಂದು ಬಂಟ್ವಾಳ ನೈಟ್ಸ್ 2K26 ಸ್ಟಾರ್ ನೈಟ್ಸ್..

ಬಂಟ್ವಾಳ: ಕಳೆದ 15 ವರ್ಷಗಳಿಂದ ಡ್ಯಾನ್ಸ್ ಟೀಮ್ ಮೂಲಕ ಪ್ರಸಿದ್ಧಿಯಾದ ಎಕ್ಸ್ ಟ್ರೀಮ್ ಡ್ಯಾನ್ಸ್ ಕ್ರೂವ್ ಬಿಸಿರೋಡು ಇವರ ವತಿಯಿಂದ ಬಂಟ್ವಾಳ ನೈಟ್ಸ್ 2 ಕೆ 26 ಸ್ಟಾರ್ ನೈಟ್ಸ್ ಮತ್ತು ಸಾಧಕರನ್ನು ಗುರುತಿಸುವ ಕಾರ್ಯಕ್ರಮ ಎ.18 ರಂದು ಬಂಟ್ವಾಳದ ದೇವರಕಟ್ಟೆ ಗ್ರೌಂಡ್ ನಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಮುಖ್ಯಸ್ಥ ವಿನೋದ್ ರಾಜ್ ತಿಳಿಸಿದ್ದಾರೆ.

ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಡ್ಯಾನ್ಸ್ ತರಬೇತಿ ಹಾಗೂ  ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಪ್ರತಿ ವರ್ಷವೂ ಅದ್ದೂರಿಯಾಗಿ ನಡೆಸುತ್ತಾ ಬಂದಿದ್ದೇವೆ.ಆದರೆ ಈ ವರ್ಷ ಒಂದು ಚೂರು ಬದಲಾವಣೆಯೊಂದಿಗೆ ಮತ್ತು ಸಂಸ್ಥೆಯ ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸಲು ವೇದಿಕೆಯನ್ನು ಸೃಷ್ಟಿಸುವ ಹೊಸ ಕಾರ್ಯಕ್ರಮ ಇದಾಗಿದೆ ಎಂದು ತಿಳಿಸಿದರು.

ಈ ಕಾರ್ಯಕ್ರಮವನ್ನು ಬೆಂಜನಪದವು ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ವಿಜಯ್ ಕುಮಾರ್ ಉದ್ಘಾಟಿಸುವರು, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ಬಿ.ರಮಾನಾಥ ರೈ ಸಹಿತ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪೂರ್ಣಿಮಾ ಶೆಟ್ಟಿ, ದಿವ್ಯಾ, ತೇಜಾಕ್ಷ, ಅರ್ಚನಾ ಇರಾ ಉಪಸ್ಥಿತರಿದ್ದರು.

ಓಂ ಶ್ರೀ ಗೆಳೆಯರ ಬಳಗ (ರಿ.) ನಾಯಿಲ : ಎ.18ರಂದು 20ನೇ ವರ್ಷದ ವಾರ್ಷಿಕ ಸಂಭ್ರಮ

ಬಂಟ್ವಾಳ: ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಓಂ ಶ್ರೀ ಗೆಳೆಯರ ಬಳಗ (ರಿ.), ನಾಯಿಲ ಪಾಣೆಮಂಗಳೂರು ಇದರ 20 ನೇ ವರ್ಷದ ವಾರ್ಷಿಕ ಸಂಭ್ರಮ ಎ. 18 ರಂದು ಶನಿವಾರ ಸಂಘದ ವಠಾರದಲ್ಲಿ ನಡೆಯಲಿದೆ ಎಂದು ಸಂಘದ ನಿಕಟಪೂರ್ವ ಅಧ್ಯಕ್ಷ ಕಿರಣ್ ಕುಮಾರ್ ಅಟ್ಲೂರು ತಿಳಿಸಿದ್ದಾರೆ.

ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕಾರ್ಯಕ್ರಮದ ವಿವರವನ್ನು ನೀಡಿದರು.

ಓಂ ಶ್ರೀ ಗೆಳೆಯರ ಬಳಗ 20 ವರ್ಷಗಳಿಂದ ನಿರಂತರವಾಗಿ ಸಾಮಾಜಿಕವಾಗಿ ಬೇರೆ ಬೇರೆ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದು, ಆಸಕ್ತ ಕುಟುಂಬಗಳಿಗೆ ನೆರವು,ಕ್ರೀಡಾ ಕ್ಷೇತ್ರ, ಸಾಂಸ್ಕೃತಿಕ ಕ್ಷೇತ್ರ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿ ಗೌರವಿಸುವ ಮತ್ತು ಪ್ರೋತ್ಸಾಹ ನೀಡುವ ಕಾರ್ಯವನ್ನು ಸಂಘದ ವತಿಯಿಂದ ಮಾಡುತ್ತಾ ಬಂದಿದ್ದೇವೆ ಎಂದು ಅವರು ತಿಳಿಸಿದರು.

ಆರೋಗ್ಯ ನಿಧಿ ಹಾಗೂ ಆರೋಗ್ಯ ನಿಧಿ ಎರಡು ಸಂಘದ ವಿನೂತನ ಕಾರ್ಯಕ್ರಮವಾಗಿದ್ದು ಅನೇಕ ಬಡಕುಟುಂಬಗಳಿಗೆ ಈ ಮೂಲಕ ನೆರವು ನೀಡುವ ಉತ್ತಮ ಕೆಲಸ ಮಾಡಿದ್ದೇವೆ.

ಮುಂದಿನ ದಿನಗಳಲ್ಲಿ ಕೂಡ ಇಂತಹ ಸಾಮಾಜಿಕವಾದ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ನೀಡುವ ಆಶಯ ನಮ್ಮದಾಗಿದೆ ಎಂದು ತಿಳಿಸಿದರು.

ಎ. 18 ರಂದು‌ ಬೆಳಿಗ್ಗೆ ಗಣಹೋಮ, ಮಧ್ಯಾಹ್ನ 12 ಗಂಟೆಗೆ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ,ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ,ಸಂಜೆ 5.30 ರಿಂದ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮ,6.30 ರಿಂದ ಕುಸಲ್ದ ಕುರ್ಲರಿ,7.30 ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಶಾಸಕ‌ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ,ಮಾಜಿ ಸಚಿವ ಬಿ.ರಮಾನಾಥ ರೈ ಸಹಿತ ಅನೇಕ ರಾಜಕೀಯ ,ಸಾಮಾಜಿಕ ಗಣ್ಯರು ಭಾಗವಹಿಸಲಿದ್ದಾರೆ.

ಸಭಾ ಕಾರ್ಯಕ್ರಮದ ಬಳಿಕ ಓಂಕಾರ್ ಇವೆಂಟ್ಸ್ ಮತ್ತು ಎಂಟರ್ ಟೈನ್ ಮೆಂಟ್ ಬಳಗದಿಂದ ಓಂ.ಶ್ರೀ ಮ್ಯೂಸಿಕಲ್ ನೈಟ್ ನಡೆಯಲಿದೆ.

ಪ್ರತಿ ವರ್ಷದಂತೆ ವಾರ್ಷಿಕ ಸಂಭ್ರಮದ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡಲಾಗುತ್ತಿದ್ದು ಈ ಬಾರಿ ಸೇವಾ ಕ್ಷೇತ್ರದಲ್ಲಿ ಅನಿಲ್ ದಾಸ್, ಕಲಾ ಕ್ಷೇತ್ರದಲ್ಲಿ ಮಹಮ್ಮದ್ ಯಾಸೀರ್ ಕಲ್ಲಡ್ಕ, ಸಾಮಾಜಿಕ ಕ್ಷೇತ್ರದಲ್ಲಿ ಜನಾರ್ದನ ಪೂಜಾರಿ ಬೋಳಂಗಡಿ,ಮಾಧ್ಯಮ ಕ್ಷೇತ್ರದಲ್ಲಿ ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ , ನಮ್ಮ ಬಂಟ್ವಾಳ ವಾಹಿನಿಯ ಸಂಪಾದಕ ಪ್ರಶಾಂತ್ ಪುಂಜಾಲಕಟ್ಟೆ ಅವರನ್ನು ಗೌರವಿಸಲಾಗುತ್ತದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ದಿನೇಶ್ ನೆಲ್ಲಿಗುಡ್ಡೆ, ಗೌರವಾಧ್ಯಕ್ಷ ನಾಗೇಶ್ ಕುಲಾಲ್, ಮಹಿಳಾ ಮಂಡಲದ ಅಧ್ಯಕ್ಷೆ ನಳಿನಿ ಶುಭಕರ ಉಪಸ್ಥಿತರಿದ್ದರು.

ಎ.18ರಂದು ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಬಂಟ್ವಾಳ : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಇದರ ವತಿಯಿಂದ ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಇದರ ಸಹಯೋಗದೊಂದಿಗೆ ಮೇ 12 ರಂದು ಪಾಣೆಮಂಗಳೂರು ಸಮೀಪದ ಎಸ್ ಎಸ್ ಹಾಲ್ ನಲ್ಲಿ ನಡೆಯಲಿರುವ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಎಪ್ರಿಲ್ 18 ರಂದು ಸಂಜೆ 4.00 ಕ್ಕೆ ಬಿ.ಸಿ.ರೋಡಿನ ಡಾ ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು ಎಚ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಇದೇ ವೇಳೆ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ರಚಿಸಲಾಗುವುದು.

ಬಂಟ್ವಾಳ ತಾಲೂಕಿನ ಬ್ಯಾರಿ ಭಾಷೆ ಮತ್ತು ಸಾಹಿತ್ಯ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಮ್ಮೇಳನದ ಯಶಸ್ಸಿಗೆ ಸಹಕರಿಸಬೇಕು ಎಂದು ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಇದರ ಪ್ರಧಾನ ಕಾರ್ಯದರ್ಶಿ ಲತೀಫ್ ನೇರಳಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

ಹಲೆಪ್ಪಾಡಿ ಶ್ರೀ ರಾಮಾಂಜನೇಯ ಭಜನ ಮಂದಿರ : ಎ.19ರಂದು ಭಜನಾ ಮಂಗಳೋತ್ಸವ

ಬಂಟ್ವಾಳ: ಬಂಟ್ವಾಳ ತಾ. ಕುಡಂಬೆಟ್ಟು ಗ್ರಾಮದ ಹಲೆಪ್ಪಾಡಿ ಶ್ರೀ ರಾಮಾಂಜನೇಯ ಭಜನ ಮಂದಿರದಲ್ಲಿ ಭಜನ ಮಂಗಳೋತ್ಸವ ಕಾರ್ಯಕ್ರಮ ಎ.19ರಂದು ನಡೆಯಲಿದೆ.

ಅಂದು ಬೆಳಗ್ಗೆ ಭಜನ ಮಂಗಳೋತ್ಸವಕ್ಕೆ ಚಾಲನೆ, ಗಣಯಾಗ, ಮಧ್ಯಾಹ್ನ ಮಹಾಪೂಜೆ, ಸಂಜೆ ಭಜನ ಮಂಗಳ, ರಾತ್ರಿ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಬಳಿಕ ನಡೆಯುವ ಧಾರ್ಮಿಕ ಸಭೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಅಧ್ಯಕ್ಷತೆ ವಹಿಸಲಿರುವರು. ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿರುವರು.

ಈ ಸಂದರ್ಭದಲ್ಲಿ ನಾಟಿ ವೈದ್ಯೆ ವೆಂಕಮ್ಮ ಪೂಜಾರ್ತಿ ಕಂಗಿತ್ಲು ಹಾಗೂ ಭಜನ ಸಂಕೀರ್ತನಕಾರ ನವೀನ್ ಶೆಟ್ಟಿ ಕಕ್ಕಿಬೆಟ್ಟು ಅವರನ್ನು ಸಮ್ಮಾನಿಸಲಾಗುವುದು. ಅನ್ನ ಸಂತರ್ಪಣೆ ಬಳಿಕ ಪುಂಜಾಲಕಟ್ಟೆ ತಾಂಬೂಲ ಕಲಾವಿದರಿಂದ ಎಲ್ಲೆ ದಾದ ಏರೆಗ್ ಗೊತ್ತು ತುಳು ನಾಟಕ ಪ್ರದರ್ಶನ ನಡೆಯಲಿದೆ ಎಂದು ಭಜನ ಮಂದಿರದ ಅಧ್ಯಕ್ಷ ಕಿರಣ್ ಕೋಟ್ಯಾನ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

Bantwal : ಬಸ್ ನಲ್ಲಿ ಮಹಿಳೆಯ ಚಿನ್ನದ ಸರ ಕಳವು –  ಪ್ರಕರಣ ದಾಖಲು 

ಬಂಟ್ವಾಳ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸುಮಾರು 18 ಗ್ರಾಮ್ ತೂಕದ ಚಿನ್ನದ ಸರ ಕಳವಾಗಿದೆ ಎಂದು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಮಹಿಳೆಯೊಬ್ಬರು ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಸರಸ್ವತಿ ಎಂಬವರು ತನ್ನ ಮಗಳೊಂದಿಗೆ ಮಡಂತ್ಯಾರಿನಿಂದ ಪೊಳಲಿಗೆ ಹೋಗಲು ಧರ್ಮಸ್ಥಳ ದಿಂದ ಸ್ಟೇಟ್ ಬ್ಯಾಂಕಿಗೆ ಹೋಗುವ ಬಸ್ಸಿನಲ್ಲಿ ಏ.15ರಂದು ಬೆಳಗ್ಗೆ ಸುಮಾರು 8.20ಕ್ಕೆ ಹತ್ತಿದ್ದರು. ಬಸ್ ನಲ್ಲಿ ಜನಸಂದಣಿ ಇದ್ದು, ಮಗಳು ಕುಳಿತಿದ್ದರೆ, ಮಹಿಳೆ ನಿಂತು ಪ್ರಯಾಣಿಸಿದ್ದರು. ಮಗಳೊಂದಿಗೆ ಬಿ.ಸಿ.ರೋಡಿನಲ್ಲಿ ಇಳಿಯುವ ವೇಳೆ ಸುಮಾರು 9 ಗಂಟೆಗೆ ಕುತ್ತಿಗೆ ನೋಡಿದ್ದು, ಈ ವೇಳೆ ಚಿನ್ನದ ಸರ ಇರಲಿಲ್ಲ. ಬಸ್ಸಿನಲ್ಲಿ ಹುಡುಕಾಡಿದರೂ ಸಿಗಲಿಲ್ಲ. ಯಾರೋ ಕಳ್ಳರು ಕುತ್ತಿಗೆಯಲ್ಲಿದ್ದ 18 ಗ್ರಾಂ ತೂಕದ ಚಿನ್ನದ ಸರವನ್ನು ಮಡಂತ್ಯಾರುನಿಂದ ಬಿ.ಸಿ ರೋಡ್ ಗೆ ಬರುವ ಸಮಯ ಬಸ್ಸಿನಲ್ಲಿ ಕಳ್ಳತನ ಮಾಡಿದ್ದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಕಳ್ಳತನವಾದ ಚಿನ್ನದ ಅಂದಾಜು ಮೌಲ್ಯ ಸುಮಾರು 2,50,000 ಆಗಬಹುದು ಎಂದು ಹೇಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಟೀಲು 7 ಮೇಳಗಳ ಎ.16ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಎ.16ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ..

ಎ.16ರ ಸೇವೆಯಾಟಗಳ ವಿವರ :

  • ರಜನಿ ಮಧುಕರ ಶೆಟ್ಟಿ, ‘ರಾಧಾಕೃಷ್ಣ ನಿವಾಸ’ ನಡುಗೋಡು
  • ವಿನಯ ದೊಡ್ಡಣ್ಣ ಶೆಟ್ಟಿ ಮತ್ತು ಮಕ್ಕಳು, ಮೊಮ್ಮಕ್ಕಳು, ‘ಶ್ರೀ ನಿಧಿ’, ಮುಂಡ್ಕೂರು ದೊಡ್ಡಮನೆ
  • ಕುಶಾಲ್ ಕುಮಾರ್ ಶೆಟ್ಟಿ, ಕೆದ್ದಲಿಕೆ ಮನೆ, ಕಾವಲಕಟ್ಟೆ, ಕಾವಲಮುಡೂರು, ಬಂಟ್ವಾಳ
  • ರತ್ನಾಕರ ಶೆಟ್ಟಿ, ಬಾಕಿಮಾರುಗುತ್ತು, ಸೂರಿಂಜೆ
  • ಸೀತಾರಾಮ ಶೆಟ್ಟಿ, ನೆತ್ತಿಲಬಾಳಿಕೆ. ‘ಶ್ರೀ ದೇವಿ ಪ್ರಸಾದ್’ ದಡಸ್, ಅಸೈಗೋಳಿ
  • ಎನ್. ರವೀಂದ್ರ ಭಟ್ ಮತ್ತು ಪತ್ನಿ, ಪುತ್ರ, ‘ಸತ್ಯ ನಿಲಯ’, ಮುಲಿಮಾರು ಮಠ, ನಿಂಜೂರು, ಕಾರ್ಕಳ
  • ಶ್ರೀಧರ ಆಚಾರ್ಯ ಮತ್ತು ಫ್ಯಾಮಿಲಿ, ಅದಿತಿ ಎನ್‌ ಕ್ಲೇವ್ ಬಳಿ ಬಿಜೈ : ಉರ್ವಸ್ಟೋರ್ ಮಹಾಗಣಪತಿ ದೇವಸ್ಥಾನದ ವಠಾರ

ಕ್ಯಾಂಪ್ಕೋ : ಇಂದಿನ ಅಡಿಕೆ, ಕೋಕಾ, ಕರಿಮೆಣಸು ದರಪಟ್ಟಿ..

ಮಂಗಳೂರು : ಕ್ಯಾಂಪ್ಕೋ ನಿಯಮಿತ ಮಂಗಳೂರು (ವಿಟ್ಲ ಶಾಖೆ) ಇಂದಿನ ಅಡಿಕೆ, ಕಾಳುಮೆಣಸು, ಕೋಕಾ ದರಪಟ್ಟಿಯನ್ನು ಬಿಡುಗಡೆ ಮಾಡಿದೆ.

ಇಂದಿನ ದರಗಳ ವಿವರ ಈ ಕೆಳಗಿನಂತಿವೆ :

ಹೊಸ ಅಡಿಕೆ ಕೆ.ಜಿ.ಗೆ 410-485, ಚೋಲ್ ಅಡಿಕೆ 425-555, ಡಬಲ್ ಚೋಲ್ ಅಡಿಕೆ 430-555, ಹೊಸ ಪಟೋರಾ 345-400, ಹಳೆ ಪಟೋರಾ 345-410 ಉಳ್ಳಿ 160-290, ಕೋಕಾ 300-345, ಕರಿಗೋಟ್ 235-265, ಕೊಕ್ಕೊ ಹಸಿ 100-100, ಕೊಕ್ಕೊ ಒಣ 300-300, ಕರಿಮೆಣಸು 320-685

CBSE Result – ಲೊರೆಟ್ಟೊ ಸೆಂಟ್ರಲ್ ಸ್ಕೂಲ್‌ಗೆ ಶೇ.100 ಫಲಿತಾಂಶ

ಬಂಟ್ವಾಳ : ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 10ನೇ ತರಗತಿಯ ಫಲಿತಾಂಶ ಪ್ರಕಟಗೊಂಡಿದ್ದು, ತಾಲೂಕಿನ ಲೊರೆಟ್ಟೊ ಸೆಂಟ್ರಲ್ ಶಾಲೆ ಮೊದಲ ಬಾರಿಗೆ ಸಿಬಿಎಸ್‌ಇ 10ನೇ ತರಗತಿಯ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಸಾಧಿಸಿದ್ದು, ಶೇ.100ರಷ್ಟು ಉತ್ತೀರ್ಣತೆ ದಾಖಲಿಸಿದೆ.

ರಾಜ್ಯದಲ್ಲಿ ಹೆಚ್ಚಾದ ಬಿಸಿಲಿನ ಅಬ್ಬರ : ಮುಂದಿನ 5 ದಿನ ಉಷ್ಣ ಅಲೆಯ ಎಚ್ಚರಿಕೆ..

ಮಂಗಳೂರು: ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದು, ಜನರು ಬಿಸಿ ವಾತಾವರಣದಿಂದ ಹೈರಾಣಾಗಿದ್ದಾರೆ. ರಾಜ್ಯದೆಲ್ಲೆಡೆ ಮುಂದಿನ 5 ದಿನಗಳಲ್ಲಿ ತಾಪಮಾನವು ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನ 5 ದಿನ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಿಗೆ ಅತ್ಯಧಿಕ ಬಿಸಿಲು ಕಂಡು ಬರುವ ಹಿನ್ನೆಲೆಯಲ್ಲಿ (‘ಉಷ್ಣ ಅಲೆ’)  ‘ಯೆಲ್ಲೋ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.

ಬಂಟ್ವಾಳ : ಬ್ಯಾರಿ ಸಾಹಿತ್ಯ ಸಮ್ಮೇಳನ – ಎ.18ರಂದು ಪೂರ್ವಭಾವಿ ಸಭೆ

ಬಂಟ್ವಾಳ : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಇದರ ವತಿಯಿಂದ ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಇದರ ಸಹಯೋಗದೊಂದಿಗೆ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನವು ಮೇ.12 ಮಂಗಳವಾರದಂದು ಪಾಣೆಮಂಗಳೂರು – ಆಲಡ್ಕದ ಎಸ್.ಎಸ್.ಹಾಲ್ ನಲ್ಲಿ ನಡೆಯಲಿರುವುದು.

ಈ ಪ್ರಯುಕ್ತ ಎ.18 ಶನಿವಾರದಂದು ಸಂಜೆ 4.00 ಕ್ಕೆ ಸರಿಯಾಗಿ ಬಿ.ಸಿ.ರೋಡಿನ ಡಾ ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.

ಇದೇ ವೇಳೆ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ರಚಿಸಲಾಗುವುದು. ಬ್ಯಾರಿ ಭಾಷೆ ಮತ್ತು ಸಾಹಿತ್ಯ ಪ್ರೇಮಿಗಳಾದ ತಾವು ಈ ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಮ್ಮೇಳನದ ಯಶಸ್ಸಿಗೆ ಸಹಕರಿಸಬೇಕಾಗಿ ಬ್ಯಾರಿ ಸಾಹಿತ್ಯ ಪರಿಷತ್ ನ ಪ್ರಧಾನ ಕಾರ್ಯದರ್ಶಿ ಲತೀಫ್ ನೇರಳಕಟ್ಟೆ ವಿನಂತಿಸಿದ್ದಾರೆ.